Saturday, April 10, 2021

SATYAVANTARA SANGAVIRALU - ಕನಕದಾಸರು


(ಸತ್ಯವಂತರ ಸಂಗವಿರಲು ತೀರ್ಥವೇತಕೆ
ನಿತ್ಯ ಜ್ಞಾನಿಯಾದ ಮೇಲೆ ಚಿಂತೆ ಯಾತಕೆ, ಚಿಂತೆ ಯಾತಕೆ // ೨ ಬಾರಿ//
* * * *
(ತಾನು ಉಣ್ಣದ ಪರರಿಗಿಕ್ಕದ ಧನವಿದ್ದೇತಕೆ
ಮಾನ ಹೀನನಾಗಿ ಬಾಳ್ವ ಮನುಜನೇತಕೆ) // ೨ ಬಾರಿ//
(ಜ್ಞಾನವಿಲ್ಲದೇ ನೂರು ಕಾಲ ಬದುಕಲೇತಕೆ
ಮಾನಿನಿಯ ತೊರೆದವಗೆ ಭೋಗವೇತಕೆ, ಭೋಗವೇತಕೆ) // ೨ ಬಾರಿ//
* * * *
(ಸಂಜ್ಞೆಯರಿತು ನಡೆಯದಿರುವ ಸತಿ ಇದ್ದೇತಕೆ
ಮುನ್ನ ಕೊಟ್ಟು ಪಡೆಯದನ್ನು ಬಯಸಲೇತಕೆ) // ೨ ಬಾರಿ//
(ಮನ್ನಣೆಯ ನಡೆಸದಿರುವ ದೊರೆಯು ಏತಕೆ
ಚೆನ್ನ ಆದಿ ಕೇಶವನಲ್ಲದ ದೈವವೇತಕೆ, ದೈವವೇತಕೆ ) // ೨ ಬಾರಿ//


ಇದನ್ನು ನುಡಿಸಿಲ್ಲ 
(ಮಾತು ಕೇಳದೆ ಮಲತು ನಡೆವ ಮಕ್ಕಳೇತಕೆ
ಪ್ರೀತಿ ಇಲ್ಲದೆ ಎಡೆಯನಿಕ್ಕಿದ ಅನ್ನವೇತಕೆ) // ೨ ಬಾರಿ//
(ನೀತಿಯರಿತು ನಡೆಯದಿರುವ ಬಂಟನೇತಕೆ
ಸೋತು ಹೆಣ್ಣಿಗೆ ಹೆದರಿ ನಡೆವ ಪುರುಷನೇತಕೆ, ಪುರುಷನೇತಕೆ) // ೨ ಬಾರಿ// 

No comments:

Post a Comment