Tuesday, May 25, 2021

Yelu swaravu seri +2 Ballad1C spd 90 Vol 50 Trump1 Accord3

Narasimha Manthra 8 50 1 10 137 329 Pa 291 147 80 77xsa - Purandara dasa...

Asima rupi ambaradalli - Doddarangegowda +2 BalladD spd80 vol50 strng20 ...


 ರಚನೆ : ಪ್ರೊ || ದೊಡ್ಡರಂಗೇಗೌಡ

ಅಸೀಮರೂಪಿ ಅಂಬರದಲ್ಲಿ ಮುಂಗಾರು ಮೂಡಿದೆ  |
ವಸುಂಧರೆಯ ಹೂಮೈಯಲ್ಲಿ ಹೊನ್ನಾರು ಕೂಡಿದೆ |
ಮಸೆವ ಬಿಸಿಲು ಮಾಗಿರುವಲ್ಲಿ ಮಂದಹಾಸ ತುಂಬಿದೆ |
ಹಸಿದ ರೈತ ಸಂಕುಲದಲ್ಲಿ ಹೊಸ ಆಸೆ ಹಾಡಿದೆ ||

ಅಗಮ್ಯ ನೆಲೆಯ ಕಾನನದಲ್ಲಿ ಹರಿದ್ವರ್ಣ ತೂಗಿದೆ |
ಅದಮ್ಯ ಸಿರಿಯ ಸಂಭ್ರಮದಲ್ಲಿ ಜೀರುಂಡೆ ಕೂಗಿದೆ |
ವರುಣ ಬರುವ ಆವೇಶದಲ್ಲಿ ದುಂಧುಭಿ ಮೊಳಗಿದೆ |
ಹರುಷ ತರುವ ಮಾರುತನಲ್ಲಿ ಮಣ್ಣಿನ ಕಂಪಿದೆ ||

ಅನನ್ಯ ಬಗೆಯ ಬಾಂದಳದಲ್ಲೂ ಸಂತೋಷ ಹೊಮ್ಮಿದೆ |
ಅನಿತ್ಯ ಬದುಕ ಗೊಂದಲದಲ್ಲೂ ಉನ್ಮಾದ ಚಿಮ್ಮಿದೆ |
ಅಸಂಖ್ಯ ಹೊದರ ತರುಲತೆಯಲ್ಲೂ ಲಾವಣ್ಯ ನಿಂತಿದೆ |
ಅನೂಹ್ಯ ಪದರ ಕಾರ್ಮುಗಿಲಲ್ಲೂ ಹೂಮಳೆಯ ಸಂಚಿದೆ ||

ಮಹಾಪೂರ ನಿರೀಕ್ಷೆಯಲ್ಲೂ ಕಾತರವೇ ಕಾಡಿದೆ |
ಗರಿಕೆ ಚಿಗುರ ಅಂಕುರದಲ್ಲೂ ಆನಂದ ತುಂಬಿದೆ |
ಹೊಸಾನೇಗಿಲ ಮುನ್ನಡೆಯಲ್ಲೂ ಋತುಮಾನದಾ ರಂಗಿದೆ |
ನವಮಾನವ ಮುನ್ನೊಟದಲ್ಲೂ ಕಾಲಚಕ್ರ ಉರುಳಿದೆ ||

Sunday, May 23, 2021

 

ಅಂಡು ಸುಟ್ಟ ಬೆಕ್ಕು

ನನ್ನ ಗೆಳೆಯ ಅಂದು ನನ್ನ ಮನೆಗೆ ಬಂದಿದ್ದ. ಜೊತೆಗೆ ಅವನ ಚಿಕ್ಕ ಮಗನೂ ಬಂದಿದ್ದ. ಅವನ ಹೆಸರು ವಿಜಿ ಎಂದು. ಅವನಂತೂ ಗೆಳೆಯನ ಮೋಟರ್ ಬೈಕಿನ ಮೇಲೆಲ್ಲಾ ಕೋತಿಯಂತೆ ಆಡಿಕೊಂಡಿದ್ದ. ಇವನ ಕಾಟವನ್ನು ತಡೆಯುವುದೇ ಕಷ್ಟ ಎಂದು ಗೆಳೆಯ ತನ್ನ ಮಗನ ಚೇಷ್ಟೆಯನ್ನು ಬಣ್ಣಿಸಿದ್ದ. ಶಕ್ತಿಯಿದ್ದಿದ್ದರೆ ಅವನು ಮೋಟಾರ್ ಬೈಕನ್ನೇ ಬಿಟ್ಟುಬಿಡುತ್ತಿದ್ದನೇನೋ ಎಂದು ನನಗೂ ಅನ್ನಿಸಿತು.

ನಂತರ ನನ್ನ ಗೆಳೆಯನು ಮನೆಗೆ ಹೊರಟ. ಜೊತೆಗೆ ಅವನ ಮಗನೂ ಅವನೊಂದಿಗೆ ಹಿಂದುಗಡೆ ಕುಳಿತ. ಹಿಂದೆ ಯಾಕೋ? ಮುಂದೆ ಕೂಡುವುದಿಲ್ಲವೇನೋ? ಎಂದೆ. ಅದಕ್ಕೆ ನನ್ನ ಗೆಳೆಯನು ಜೋರಾಗಿ ನಗುತ್ತಾಅಯ್ಯೋ ಅದೊಂದು ಕತೆಎಂದು ಕತೆಯನ್ನು ಹೇಳಿದ.

ಹಿಂದೆ ಹೀಗೆಯೇ ನಾನು ಮಗನನ್ನು ಹೊರಗೆ ಸುತ್ತಾಡಿಸಲು ಕರೆದುಕೊಂಡು ಹೋಗಿದ್ದೆ. ಆಗೆಲ್ಲಾ ಅವನನ್ನು  ಮುಂದುಗಡೆಯೇ ಕೂಡಿಸಿಕೊಂಡು ತಿರುಗಾಡುತ್ತಿದ್ದೆ. ಅಂದು ತುಂಬಾ ಬಿಸಿಲಿತ್ತು. ಮಗನನ್ನು ವಾಪಸ್ಸು ಕರೆದುಕೊಂಡು ಬರುವಾಗ ಬೈಕಿನ ಮೇಲೆ ಕೂಡಿಸಿದೆ. ಆದರೆ ಮಗ ಕಿಟಾರನೆ ಕಿರುಚಿ ಅಳಲು ಪ್ರಾರಂಬಿಸಿದ. ನಾನು ಯಾಕೋ? ಎಂದು ಮತ್ತೆ ಅಲ್ಲೇ ಸರಿಯಾಗಿ ಕೂಡಿಸಿದರೆ ಮತ್ತೆ ಕಿರುಚಿ ಗಲಾಟೆ ಮಾಡಿದ. ನಂತರ ಅವನು ಅಲ್ಲಿಂದ ಎಗರಿಬಿಟ್ಟು ನೆಲದ ಮೇಲೆ ಅಳುತ್ತಾ ಕುಳಿತ. ಆಗ ಯಾಕಿರಬಹುದು? ಎಂದು ಅವನು ಕುಳಿತ ಜಾಗದಲ್ಲಿ ಕೈ ಇಟ್ಟು ನೋಡಿದರೆ ಅದು ಬಿಸಿಲಿಗೆ ಕಾದು ಕಾವಲಿಯಂತಾಗಿತ್ತು. ನನಗೆ ಆಗ ನನ್ನ ಕೈಗೇ ಹೀಗೆ ಸುಟ್ಟರೆ ಪಾಪ ಪುಟ್ಟ ಮಗುವಿಗೆ ಎಷ್ಟುನೋವಾಗಿರಬಹುದು? ಎಂದು ದುಃSವಾಯಿತು. ನಂತರ ಜಾಗಕ್ಕೆ ಒದ್ದೆ ಬಟ್ಟೆಯನ್ನು ಹಾಕಿ ಕೂಡಿಸಿದರೂ ಅವನು ಅದರ ಮೇಲೆ ಕುಳಿತುಕೊಳ್ಳಲೇ ಇಲ್ಲ. ನಂತರ ಹೇಗೋ ಅವನನ್ನು ಸಮಾಧಾನ ಮಾಡಿ ನನ್ನ ಹಿಂದೆ ಕೂಡಿಸಿಕೊಂಡು ಬಂದೆ. ಅಂದಿನಿಂದ ಅವನು ಜಾಗದಲ್ಲಿ ಏನು ಮಾಡಿದರೂ ಕೂಡುವುದಿಲ್ಲ. ಒಬ್ಬನೇ ಇದ್ದರೆ ಅಲ್ಲಿ ಕುಳಿತು ಆಡಿಕೊಳ್ಳುತ್ತಾನೆ, ನನ್ನ ಜೊತೆಗಾದರೆ ಜಪ್ಪಯ್ಯ ಅಂದರೂ ಕೂಡುವುದಿಲ್ಲ. ಒಳ್ಳೆ ತೆನಾಲಿರಾಮನ ಬೆಕ್ಕಿನಂತಾಗಿದೆ ಅವನ ಕತೆ ಎಂದು ನಕ್ಕ. ಈಗ ಘಟನೆಯನ್ನು ನೆನೆಸಿಕೊಂಡರೆ ನಗು ಬರುವುದು, ಆದರೆ ಅಂದಿನ ದಿನ ಮಾತ್ರ ನಾನೂ ಮರೆಯುವುದಿಲ್ಲ, ನನ್ನ ಮಗನೂ ಮರೆತಿಲ್ಲ ಎಂದು ಹೇಳಿದ.

ಕುದಿಯುವ ಹಾಲನ್ನು ಕುಡಿಸಿ ನಂತರ ಹಾಲು ಎಂದರೆ ಓಡಿಹೋಗುವಂತೆ ಮಾಡಿದ್ದ ತೆನಾಲಿರಾಮನ ಬೆಕ್ಕಿನ ಕತೆಯನ್ನು ಜ್ಞಾಪಿಸಿಕೊಂಡು ಇಬ್ಬರೂ ಮನಸಾರೆ ನಕ್ಕೆವು. ‘ಅಂಡು ಸುಟ್ಟ ಬೆಕ್ಕು ಅನ್ನುತ್ತಾರಲ್ಲೋ ಹಾಗೆ ಮಾಡಿಬಿಟ್ಟೆಯಲ್ಲೋ ನಿನ್ನ ಮಗನಿಗೆಎಂದು ನಾನೂ ರೇಗಿಸಿದೆ. ನಾನು ಮೆಲ್ಲಗೆ ವಿಜಿಯನ್ನು ಮತ್ತೆ ಮುಂದಿನ ಸೀಟಿನ ಮೇಲೆ ಕೂಡಿಸಲು ನೋಡಿದೆ, ಆದರೆ ಅವನು ಕೊಸರಿಕೊಂಡು, ಎಗರಿ ಮತ್ತೆ ಹಿಂದಿನ ಸೀಟಿನ ಮೇಲೆ ಅಪ್ಪನನ್ನು ತಬ್ಬಿಕೊಂಡು ಕುಳಿತ. ಮುಗ್ಧ ಮಗುವನ್ನು ನೋಡಿ ಪಾಪ ಅಂದು ಅದೆಷ್ಟು ಕಷ್ಟ ಅನುಭವಿಸಿತೋ ಏನೋ ಎಂದು ಕನಿಕರವಾಯಿತು, ನಗಬಾರದೂ ಎಂದರೂ ನಗು ಬಂತು. ವಿಜಿ ಮಾತ್ರ ನನ್ನನ್ನೇ ಪಿಳಿಪಿಳಿ ಎಂದು ನೋಡುತ್ತಿದ್ದ. ಟಾಟಾ ಎಂದು ಅವನಿಗೆ ವಿದಾಯ ಹೇಳಿದೆ.

- ಜಗದೀಶ ಚಂದ್ರ ಬಿ ಎಸ್,

ಅಮ್ಮನ ತರ್ಕ

ಅಮ್ಮನ ತರ್ಕ  

ವಾಸು ಮನೆಯೊಂದನ್ನು ಕಟ್ಟಿಸುತ್ತಿದ್ದ. ಅದಕ್ಕಂತೂ ಒಬ್ಬರದು ಒಂದೊಂದು ಸಲಹೆಗಳು. ಮಗ ಆಗಲೇ ನನ್ನ ಕೋಣೆ ಹೀಗಿರಬೇಕು ಹಾಗಿರಬೇಕು ಎಂದು ಕನಸು ಕಟ್ಟಿದ್ದ. ಮಗಳಂತೂ ತನ್ನ ಕೋಣೆಗೆ ಬಣ್ಣ, ಅಲಂಕಾರ ಎಲ್ಲದರ ಕನಸು ಕಾಣುತ್ತಿದ್ದಳು. ಹೆಂಡತಿಯದು ಇನ್ನೇನೋ ಕನಸುಗಳು. ಅವನ ಅಮ್ಮ ಜಾನಕಮ್ಮ ಮಾತ್ರ "ಒಂದು ಒಳ್ಳೆಯ ಮನೆಯಾದರೆ ಸಾಕು" ಎನ್ನುತ್ತಿದ್ದರು. ವಾಸು, "ತನ್ನ ಮನೆಯವರ ಕನಸುಗಳು, ಮಿತ್ರರ ಸಲಹೆಗಳು ಇವುಗಳ ನಡುವೆ ಸಿಲುಕಿ, ಮನೆ ಅಂತ ಮುಗಿಸಿದರೆ ಸಾಕು" ಎಂದು ಕೊಳ್ಳುತ್ತಿದ್ದ. 

ಹೀಗೆ ಮನೆಯ ಕೆಲಸಗಳು ಸಾಗುತ್ತಿದ್ದವು. ಎಲ್ಲರಿಗೂ ಅವರವರ ಕನಸುಗಳನ್ನು ಸಾಕಾರ ಗೊಳಿಸುವ ಯೋಚನೆಯೇ. ದೇವರ ಮನೆಯನ್ನು ಒಂದು ಕಡೆ ಗೊತ್ತು ಮಾಡಲಾಗಿತ್ತು. ಅದಕ್ಕೆ ಯಾರೂ ವಾರಸುದಾರರಿರಲಿಲ್ಲ, ವಾಸುವೇ ನೋಡಿಕೊಳ್ಳಬೇಕಿತ್ತು, ಜಾನಕಮ್ಮ, ನೀನು ಎಲ್ಲಿ ಮಾಡಿಕೊಟ್ಟರೆ ನಾನು ಅಲ್ಲಿ ಕುಳಿತು ದೇವರ ಧ್ಯಾನ ಮಾಡುವೆ ಎಂದುಬಿಟ್ಟಿದ್ದರು. ವಾಸು ಅವರಿವರ ಸಲಹೆಗಳನ್ನು ಕೇಳುತ್ತ ಅದನ್ನು ಮಾಡಲೋ ಬೇಡವೋ ಎಂದು ಒದ್ದಾಡುವುದನ್ನು ಕಂಡು ಜಾನಕಮ್ಮ "ಸುಮ್ಮನೆ ನಿನಗೆ ಹೇಗೆ ಬೇಕೋ ಹಾಗೆ ಕಟ್ಟಿಸು, ಹತ್ತು ಜನರನ್ನು ಕೇಳಿದರೆ ಹತ್ತು ತರಹ ಹೇಳುತ್ತಾರೆ, ಯಾರದನ್ನು ಒಪ್ಪುವೆ?" ಎಂದು ಬೈಯುತ್ತಿದ್ದರು. ಆದರೂ ವಾಸು ಅದನ್ನು ಬಿಟ್ಟಿರಲಿಲ್ಲ. 

ಹೀಗೆ ಒಂದು ದಿನ ವಾಸು ಅದ್ಯಾರನ್ನೋ ಮನೆಗೆ ಕರೆದುಕೊಂಡು ಬಂದಿದ್ದ. ಅವರು ತೆಲುಗು ಮಾತನಾಡುವವರು. ವಾಸ್ತು ಪಂಡಿತರು ಎಂದು ಹೇಳಿಕೊಂಡರು. ಅವರಂತೂ ಈ ಮನೆಗೆ ಬಂದ ಕೂಡಲೇ ಅವರು ಈಗಿರುವ ಮನೆಯ ಬಗ್ಗೆ ಏನೇನೋ ಹೇಳತೊಡಗಿದರು. ಇದ್ಯಾರು ಈ ಮನೆಗೆ ಬಾಗಿಲನ್ನು ಇಲ್ಲಿಡಲು ಹೇಳಿದ್ದು? ಅಯ್ಯೋ ನಿಮ್ಮ ಮನೆಯ ಭಾವಿ ಇಲ್ಲೇಕೆ ತೊಡಿಸಿದ್ದೀರಿ? ಅಡುಗೆ ಮನೆಯ ಜಾಗವೇ ಸರಿಯಾಗಿಲ್ಲ, ಮಲಗುವ ಮನೆಯಂತೂ ದೇವರಿಗೇ ಪ್ರೀತಿ" ಎಂದೆಲ್ಲ ಬಡಬಡಿಸತೊಡಗಿದರು. ಇದು ಜಾನಕಮ್ಮನವರ ಮನೆ. ಅದನ್ನು ಅವರ ಗಂಡ ಸೀತಾಪತಿ ಕಟ್ಟಿಸಿದ್ದರು. ಆಗ ಅವರು ಪಟ್ಟ ಕಷ್ಟ,ನಷ್ಟ ಎಲ್ಲವೂ ಜಾನಕಮ್ಮನಿಗೆ ಗೊತ್ತಿತ್ತು. ಈ ಪಂಡಿತ ಹೀಗೆ ಬಂದಕೂಡಲೇ ಈಗಿರುವ ಮನೆಯ ಬಗ್ಗೆ ಮಾತನಾಡಿದ್ದು ಅವರನ್ನು ಕೆರಳಿಸಿತ್ತು. ಆದರೆ ಅದನ್ನು ತೋರಿಸದೆ ಮಗನಿಗೆ "ನಿಮ್ಮ ಹೊಸ ಮನೆಯ ಬಗ್ಗೆ ಅದೇನು ಹೇಳುತ್ತಾನೋ ಅಷ್ಟನ್ನು ಕೇಳಿ ಮೊದಲು ಹೊರಗೆ ಕಳಿಸು" ಎಂದಿದ್ದರು. "ಇಲ್ಲವಾದರೆ ನಾನೆ ಬಂದು ಹೇಳಬೇಕಾಗುತ್ತೆ" ಎಂದೂ ಹೇಳಿದರು.

ಆತ ಹೋದಮೇಲೆ ಜಾನಕಮ್ಮ ಯೋಚಿಸಿದರು. ಅಲ್ಲ, ನಾವು ಈ ಮನೆಯಲ್ಲಿ ಇಷ್ಟು ವರ್ಷ ಬದುಕಿ ಬಾಳಿದೆವು, ಈಗ ಚೆನ್ನಾಗಿಯೇ ಇದ್ದೀವಲ್ಲ, ಸೀತಾಪತಿ ಅವರು ಹೋಗಲು ಅವರ ಅರೋಗ್ಯ ಕಾರಣವೆ ಹೊರತು ಮನೆ ವಾಸ್ತುವಲ್ಲ. ಅದೆಷ್ಟು ಸುಲಭವಾಗಿ ಮನೆಯ ಬಗ್ಗೆ ಏನೇನೊ ಬಡಬಡಿಸಿ ಮಾನಸಿಕವಾಗಿ ಹೆದರಿಸಿಬಿಡುತ್ತಾರೆ, ಹೆದರುವವರಿಗೆ ಇನ್ನೂ ಹೆದರಿಸಿ ತಾವು ಹೇಳಿದ್ದೆ ಸರಿ ಎಂದು ನಂಬಿಸುತ್ತಾರೆ ಎಂದು ಮನಸಿನಲ್ಲೇ ಅಂದುಕೊಂಡರು. ಮೊದಲು ಮಗನಿಗೆ ಸರಿಯಾಗಿ ಬುದ್ದಿ ಹೇಳಿ, ಧೈರ್ಯವಾಗಿ ಮನೆಯನ್ನು ಹೇಗೆ ಬೇಕೋ ಹಾಗೆ ಕಟ್ಟಿಸಿಕೊ ಎಂದು ಹೇಳಬೇಕು ಅಂದುಕೊಂಡರು. 

ಆ ಮನುಷ್ಯ ಹೋದಮೇಲೆ ವಾಸು ತಲೆಯ ಮೇಲೆ ಕೈಹೊತ್ತು ಕುಳಿತಿದ್ದ. ಅವನು ಕಟ್ಟಿಸಲು ಪ್ರಾರಂಭಿಸಿದ್ದ ಮನೆಯ ನಕ್ಷೆಯೇ ಬದಲು ಮಾಡುವಂತೆ ಆ ಪಂಡಿತ ಹೇಳಿ ಇವನ ತಲೆ ಕೆಡಿಸಿದ್ದ. ದೇವರ ಮನೆಯ ಜಾಗ ಸಂಪೂರ್ಣವಾಗಿ ಬದಲಾಯಿಸಬೇಕು ಎಂದಿದ್ದ. ಆಗ ಜಾನಕಮ್ಮ, ವಾಸುವಿಗೆ, "ದೇವರ ಮನೆ ಈಶಾನ್ಯಕ್ಕೆ ಯಾಕಿರಬೇಕು ಎಂದರೆ ದೇವರನ್ನು ಪೂಜೆ ಮಾಡುವವರು ಉತ್ತರಕ್ಕೆ ಅಥವಾ ಪೂರ್ವಕ್ಕೆ ತಿರುಗಿ ಕುಳಿತುಕೊಳ್ಳಲಿ ಎಂದು. ಇವೆಲ್ಲ ಹಿಂದೆ ದೊಡ್ಡ ಜಾಗಗಳಿದ್ದಾಗ ಮಾಡುತ್ತಿದ್ದರು. ಈಗ ನಿನ್ನ ಮನೆಯೇನು ತೋಟದ ಮನೆಯೇ, ಇವೆಲ್ಲ ನೋಡಲಿಕ್ಕೆ" ಎಂದು ಬುದ್ಧಿ ಹೇಳಿ ಧೈರ್ಯ ತುಂಬಿದರು. "ದೇವರ ಕೊಣೆಯಲ್ಲಿ ನಾವು ಪೂರ್ವ ದಿಕ್ಕಿಗೆ ಕುಳಿತು ಪೂಜೆ ಮಾಡಬಹುದು, ಅಷ್ಟು ಸಾಕು, ಸುಮ್ಮನೆ ಏನೇನೋ ಯೋಚಿಸಬೇಡ" ಎಂದಿದ್ದರು.

 ಆ ಪಂಡಿತ ಇನ್ನೊಮ್ಮೆ ಮನೆಗೆ ಬಂದಾಗ, ಜಾನಕಮ್ಮ ತಾವೇ ಮುಂದೆ ಬಂದು ಆತನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡು, "ನಾವು ಈ ಮನೆಯನ್ನು ಬೆವರು ಹರಿಸಿ ಕಟ್ಟಿಸಿದೆವು, ನೀನು ಬಂದು ಒಂದು ನಿಮಿಷಕ್ಕೆ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ಹೇಳಿ ಹೆದರಿಸಿಬಿಟ್ಟೆಯಲ್ಲಾ" ಎಂದೆಲ್ಲ ಹೇಳಿ ಬೈದು "ಇನ್ನೊಮ್ಮೆ ಇಲ್ಲಿ ಬಂದರೆ ನಾವು ಸುಮ್ಮನಿರುವುದಿಲ್ಲ" ಎಂದು ಒಳಗೆ ಹುಡುಗಿಟ್ಟುಕೊಂಡಿದ್ದ ಸಿಟ್ಟನ್ನು ಕಕ್ಕಿ, ಬೈದು ಕಳಿಸಿದರು. ವಾಸು, ಅಮ್ಮನಿಗೆ ಬುದ್ಧಿ ಹೇಳಲು ಬಂದಾಗ, ಅವರು ಸಾಕ್ಷಾತ್ ದುರ್ಗೆಯೇ ಆಗಿ ಮಗನಿಗೆ, "ನಿನಗೆ ಹೇಗೆ ಬೇಕೋ ಹಾಗೆ ಕಟ್ಟಿಸಿದರೆ ಸರಿ, ಇಲ್ಲವಾದರೆ ಮನೆ ಕಟ್ಟಿಸಲೇ ಬೇಡ, ಈ ಮನೆಯೇ ಸಾಕು" ಎಂದಾಗ ವಾಸು ಹೆದರಿ ತೆಪ್ಪಗಾಗಿದ್ದ. ಆಗ ಜಾನಕಮ್ಮ "ನನಗೆ ಗೊತ್ತಿರುವವರು ಒಬ್ಬರು ಇದ್ದಾರೆ, ಅವರು ಹೇಳಿದಂತೆ ಮಾಡು, ಎಲ್ಲವೂ ಸರಿಯಾಗುತ್ತದೆ" ಎಂದು ಸಮಾಧಾನವನ್ನೂ ಹೇಳಿದ್ದರು. 

ಒಂದು ದಿನ ಜಾನಕಮ್ಮನವರು ಯಾರೋ ಒಬ್ಬರನ್ನು ಕರೆಸಿದ್ದರು. ಜಾನಕಮ್ಮನವರೆ ಮುಂದೆ ನಿಂತು ಹೊಸ ಮನೆಯ ವಿವರಗಳನ್ನು ನೀಡಿ ಅವರ ಸಲಹೆ ಕೇಳಿದರು. ಅವರು ಬಹಳ ನಿಧಾನಸ್ಥರು, ನಿಧಾನವಾಗಿ, ನಾಟಕದವರಂತೆ ಮಾತನಾಡುತ್ತಿದ್ದರು. ಅವರು ಸಾವಕಾಶವಾಗಿ ಹೇಳಿದ್ದುದನ್ನೆಲ್ಲಾ ಕೇಳಿ ಸಮಾಧಾನವಾಗಿ, "ನೀವು ಮಾಡುತ್ತಿರುವುದೆಲ್ಲ ಸರಿಯಾಗಿದೆ, ಮನೆಯ ಗೇಟು, ಬಾಗಿಲನ್ನು ಸ್ವಲ್ಪ ನಾನು ಹೇಳುವಂತೆ ಬದಲಾಯಿಸಿದರೆ ಸಾಕು" ಎಂದರು. ಇದು ವಾಸುವಿನ ಮನಸ್ಸಿಗೆ ಒಂದು ರೀತಿಯ ಸಮಾಧಾನ ತಂದಿತು. ಆಗ ಅವರು " ನೀವು ಇನ್ನು ಯಾರನ್ನೂ ಕೇಳದೆ ಬೇಗ ಮುಗಿಸಿ, ಇನ್ನೊಂದೆರಡು  ತಿಂಗಳಿನಲ್ಲಿ ಗೃಹಪ್ರವೇಶ ಮಾಡಿಸಿದರೆ ನಿಮಗೆ ತುಂಬಾ ಒಳ್ಳೆಯದಾಗುತ್ತೆ, ನಾನು ಜಾನಕಮ್ಮನವರೊಡನೆ ಸಮಾಲೋಚಿಸಿ ದಿನ ಹೇಳುತ್ತೇನೆ" ಎಂದಾಗ ವಾಸುವಿಗೆ ನಿರಾಳ. ಅವರ ಸಂಭಾವನೆ ಮೊದಲಾದುವನ್ನು ಕೇಳಿದಾಗ, "ಜಾನಕಮ್ಮ ನವರ ಬಳಿ ದುಡ್ಡು ತೆಗೆದುಕೊಳ್ಳುವುದೇ? ಎಂಥ ಮಾತನಾಡುತ್ತೀರಿ" ಎಂದು ಬಾಯಿ ಮುಚ್ಚಿಸಿದ್ದರು. 

ಅಂತೂ ಜಾನಕಮ್ಮನವರು ಗೃಹಪ್ರವೇಶದ ಮುಹೂರ್ತವನ್ನು ಮಗನಿಗೆ ತಿಳಿಸಿದರು. ಈಗ ಮನೆಯ ಕೆಲಸಗಳು ಬೇಗ ಬೇಗ ಚುರುಕಾಗಿ ಸಾಗತೊಡಗಿದವು. ವಾಸುವಿಗೆ ಯಾರನ್ನು ಸಲಹೆ ಕೇಳಲು ಪುರುಸೊತ್ತು ಇರಲಿಲ್ಲ, ಕೇಳಬೇಡ ಎಂದು ಸಲಹೆ ಬಂದುದ್ದರಿಂದ, ಅಮ್ಮನ ಹೆದರಿಕೆಯೂ ಇದ್ದುದರಿಂದ ತೆಪ್ಪಗೆ ಮನೆ ಮುಗಿಸುವುದರಲ್ಲಿ ತೊಡಗಿಸಿಕೊಂಡ. ಮನೆ ಮುಗಿಯಿತು. ಗೃಹಪ್ರವೇಶವೂ ಆಯಿತು. ಎಲ್ಲರಿಗೂ ಖುಷಿಯೋ ಖುಷಿ. ಮನೆಯ ಬಗ್ಗೆ ಯಾರಾದರೂ ತಕರಾರು ಎತ್ತಿದರೆ ಜಾನಕಮ್ಮನ ರೌದ್ರಾವತಾರವನ್ನು ನೋಡಬೇಕಿತ್ತು. ಅವರು, "ತಾವು ಹೇಗೆ ರೌದ್ರಾವತಾರ ತಾಳಿದ್ದೆ" ಎಂದು  ಆ ಹಳೆಯ ವಾಸ್ತು ಪಂಡಿತನನ್ನು ಓಡಿಸಿದ್ದನ್ನು ಎಲ್ಲರಿಗೂ ಹೇಳುತ್ತಿದ್ದರು. ಇಂಡೈರೆಕ್ಟ್ ಆಗಿ ಅದು ಮನೆಯಬಗ್ಗೆ ಕೊಂಕು ತೆಗೆಯುವವರಿಗೆ ತೆಪ್ಪಗಿರುವಂತೆ ಹೇಳುವ ಸೂಚನೆಯೇ ಆಗಿತ್ತು. ಅದು ಎಲ್ಲರಿಗೂ ನಾಟಿತ್ತು. ಮಾತನಾಡಿದರೆ ತಮಗೂ ಅದೇ ಗತಿ ಎಂದು ತೆಪ್ಪಗಿದ್ದರು. ಜಾನಕಮ್ಮನವರಿಗೂ ಅದೇ ಬೇಕಿತ್ತು. ನಮ್ಮ ಮನೆ, ನಮಗೆ ಬೇಕಾದಂತೆ ಕಟ್ಟಿಸುತ್ತೇವೆ, ನಮ್ಮ ಕಷ್ಟ ನಮಗೆ, ಹೀಗೆ ಎಲ್ಲಾ ಆದಮೇಲೆ ಸಲಹೆ ನೀಡಲು ಇವರುಗಳ್ಯಾರು ಎಂಬುದು ಜಾನಕಮ್ಮನ ತರ್ಕವಾಗಿತ್ತು.

ಆ ಮನೆಗೆ ಜಾನಕಮ್ಮನ ದಾಯಾದಿಯೊಬ್ಬರ ಮಗ ನಾರಾಯಣ, ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿ, ತುಂಬಾ ಚುರುಕಾಗಿ, ಮನೆಯವರಂತೆಯೇ ಅನೇಕ ಸಹಾಯ ಮಾಡಿಕೊಂಡು ಓಡಾಡುತ್ತಿದ್ದ. ಜಾನಕಮ್ಮ ಅವರೂ ಅವನಿಗೆ ವಿಶೇಷ ಉಪಚಾರ ಮಾಡುತ್ತಿದ್ದರು. ಎಲ್ಲರೂ, "ಇದೇನು ಅಷ್ಟೇನೂ ನಮ್ಮೊಂದಿಗೆ ಆಪ್ತವಾಗಿರದಿದ್ದ, ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಇವನಿಗೆ ಇಷ್ಟೊಂದು ಉಪಚಾರ", ಎಂದು ಮಾತನಾಡಿ ಕೊಳ್ಳುತ್ತಿದ್ದರು. ಅವರ ಮನೆಗೆ ಸಲಹೆ ನೀಡಿದ "ಆ ಹೊಸ ಪಂಡಿತ ಎಲ್ಲಿ? ಬಂದೇ ಇಲ್ಲ" ಎಂದು ಎಲ್ಲರೂ ವಿಚಾರಿಸಿದಾಗ, ಜಾನಕಮ್ಮ, "ಅವನೊಬ್ಬ, ಹಾಗೆಯೇ, ಸ್ವಲ್ಪ ಜಂಬ ಮಾಡುತ್ತಾನೆ, ಗೋಗರೆದರೂ ಬರಲೇ ಇಲ್ಲ" ಎಂದು ನಾರಾಯಣನನ್ನು ನೋಡಿ ಕಣ್ಣು ಮಿಟುಕಿಸಿದ್ದರು. ಆದರೆ ಅದು ಬೇರೆ ಯಾರಿಗೂ ಕಂಡಿರಲಿಲ್ಲ. 

- ಬಿ ಎಸ್ ಜಗದೀಶ ಚಂದ್ರ -



Sunday, May 2, 2021

Kugidaruu Dani kelade 12 40 137 329 Da 291 147 80 77VSa

ಕೂಗಿದರು ಧ್ವನಿ ಕೇಳದೆ ಶಿರ |
ಬಾಗಿದರು ದಯ ಬಾರದೆ
ಭೋಗಿಶಯನ ಭುವನಾಧಿಪತೇ ನಿನ್ನ |
ಆಗಮನವೆಂದಿಗೆ ಆಗುವುದು ಪ್ರಭೊ

ಭಕ್ತರಿಗೊಲಿದವ ನೀನು ಖರೆ ಎ|
ನ್ನತ್ತ ನೋಡುವುದು ದೊರೆ ||
ಚಿತ್ತವಧಾನ ಪರಾಕು ಮಹಾಪ್ರಭು |
ಎತ್ತಣ ರಥವನು ಎತ್ತಿ ಬಾ ನೀಡು ದೊರೆ||1||

ಸಿಂಧುಶಯನ ಶೇಷಾದ್ರಿ ವರ ಸಿರಿ |
ಮಂದಿರ ಭಕ್ತ ಕುಟುಂಬಧರ ||
ಸುಂದರ ಮೂರುತಿ ಒಂದಿನ ಸ್ವಪ್ನದಿ |
ಬಂದು ಪದದ್ವಯ ಚಂದದಿ ತೋರಿಸೊ||2||

ಕರುಣಾ ಶರಧಿಯು ನೀನಲ್ಲವೇ ಕೃಷ್ಣ |
ಶರಣಾಗತರಿಗೆ ದೊರೆಯಲ್ಲವೆ ||
ಮೊರೆಹೊಕ್ಕವರಿಗೆ ಮರೆಯಾಗುವರೆ |
ಸರಿಯೆ ಜಗದೊಳು ವಿಜಯವಿಠ್ಠಲರೇಯಾ ||3||

Deewana Hua Badal - Kashmir Ki Kali - In Keyboard - B S Jagadeesha Chandra

Kavi Bharavi - Manohara Kathegalu - Short stories - B N Sundara Rao

Bhima Bhavani - Manohara Kathegalu - ಬ ನ ಸುಂದರರಾವ್ - Short stories

Manava Janma Doddadu Purvikalyani 8 50 1 0 137 split da 329 55 77xsa