ಕೂಗಿದರು ಧ್ವನಿ ಕೇಳದೆ ಶಿರ |
ಬಾಗಿದರು ದಯ ಬಾರದೆ
ಭೋಗಿಶಯನ ಭುವನಾಧಿಪತೇ ನಿನ್ನ |
ಆಗಮನವೆಂದಿಗೆ ಆಗುವುದು ಪ್ರಭೊ
ಭಕ್ತರಿಗೊಲಿದವ ನೀನು ಖರೆ ಎ|
ನ್ನತ್ತ ನೋಡುವುದು ದೊರೆ ||
ಚಿತ್ತವಧಾನ ಪರಾಕು ಮಹಾಪ್ರಭು |
ಎತ್ತಣ ರಥವನು ಎತ್ತಿ ಬಾ ನೀಡು ದೊರೆ||1||
ಸಿಂಧುಶಯನ ಶೇಷಾದ್ರಿ ವರ ಸಿರಿ |
ಮಂದಿರ ಭಕ್ತ ಕುಟುಂಬಧರ ||
ಸುಂದರ ಮೂರುತಿ ಒಂದಿನ ಸ್ವಪ್ನದಿ |
ಬಂದು ಪದದ್ವಯ ಚಂದದಿ ತೋರಿಸೊ||2||
ಕರುಣಾ ಶರಧಿಯು ನೀನಲ್ಲವೇ ಕೃಷ್ಣ |
ಶರಣಾಗತರಿಗೆ ದೊರೆಯಲ್ಲವೆ ||
ಮೊರೆಹೊಕ್ಕವರಿಗೆ ಮರೆಯಾಗುವರೆ |
ಸರಿಯೆ ಜಗದೊಳು ವಿಜಯವಿಠ್ಠಲರೇಯಾ ||3||
No comments:
Post a Comment